Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:34 - ಕನ್ನಡ ಸತ್ಯವೇದವು C.L. Bible (BSI)

34 ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಭುಕ್ ಲಾಗಲ್ಲೊ ಅಪ್ನಾಚ್ಯಾ ಘರಾತುಚ್ ಜೆವ್ನ್ ಯೆಂವ್ದಿತ್, ನಾ ಹೊಲ್ಯಾರ್ ತುಮಿ ಜಲಮಲ್ಲೆಚ್ ತುಮ್ಚ್ಯಾ ಝಡ್ತಿಕ್ ಕಾರನ್ ಹೊತಾ.ಅನಿ ಹುರಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗ್ತಲೆ ಹಾಯ್ ತೆ ಮಿಯಾ ಥೈ ಯೆಲ್ಲೆ ತನ್ನಾ ಸಮಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:34
9 ತಿಳಿವುಗಳ ಹೋಲಿಕೆ  

ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.


ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.


ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆ: ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ. ನಾನು ಬಂದಾಗ ಹಣ ಸಂಗ್ರಹಿಸುವ ಅವಶ್ಯಕತೆ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು