Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:11 - ಕನ್ನಡ ಸತ್ಯವೇದವು C.L. Bible (BSI)

11 ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಬಾರಿಕ್ ಹೊತ್ತೊ ತನ್ನಾ ಬಾರ್‍ಕ್ಯಾ ಪೊರಾ ಸಾರ್ಕೆ ಬೊಲಿ, ಬಾರಿಕ್ ಪೊರಾ ಸಾರ್ಕೆ ಕಳ್ವುನ್ ಘೆಯ್ ಅನಿ ಬಾರಿಕ್ ಪೊರಾ ಸಾರ್ಕೆ ಚಿಂತಿ. ಅತ್ತಾ ಜಾನ್ತೊ ಹೊಲ್ಲ್ಯಾ ತನ್ನಾ ಬಾರಿಕ್ ಪೊರಾಚಿ ಸಗ್ಳಿ ಚಲ್ನುಕ್ ಮಿಯಾ ಸೊಡುನ್ ಸೊಡ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:11
8 ತಿಳಿವುಗಳ ಹೋಲಿಕೆ  

ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ.


ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.


ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು