Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:7 - ಕನ್ನಡ ಸತ್ಯವೇದವು C.L. Bible (BSI)

7 ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪ್ರೆಮ್ ಸಗ್ಳೆ ಸೊಸುನ್ ಘೆವ್ನ್ ಜಾತಾ, ಸಗ್ಳ್ಯಾ ವೈರ್ ಬರೊಸೊ ಕರ್‍ತಾ ಅನಿ ಸಗ್ಳೆ ಸಂಬಾಳುನ್ ಘೆವ್ಕ್ ಜಾತಾ ಅನಿ ಧೈರ್ಯಾನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:7
29 ತಿಳಿವುಗಳ ಹೋಲಿಕೆ  

ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II


ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


“ಆ ಕಾಲದಲ್ಲಿ ನಾನು ನಿಮ್ಮನ್ನು ಸಂಬೋಧಿಸಿ, ‘ನಿಮ್ಮ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ;


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ಆ ಮಹಿಳೆ ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಡಿಕೊಂಡಿದ್ದರೂ ತಪ್ಪಿಸುವವರು ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು