Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:8 - ಕನ್ನಡ ಸತ್ಯವೇದವು C.L. Bible (BSI)

8-9 ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪ್ರೆಮ್ ಕನ್ನಾಬಿ ಸರಿನಾ, ಪ್ರವಾದ್ಯಾಚೆ ಬೊಲ್ನೆ ಸರುನ್, ಜಾಯ್ಲ್ ವಿಚಿತ್ರ್ ಭಾಶಾ ಬೊಲ್ತಲೆ ವರು ಸರುನ್ ಜಾಯ್ಲ್; ಶಾನ್‍ಪಾನಾಚಿ ವರಾ ನಾ ಪತ್ತೊ ಹೊವ್ನ್ ಜಾತಿಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:8
14 ತಿಳಿವುಗಳ ಹೋಲಿಕೆ  

ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.


ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಸಹೋದರರೇ, ದೇವರ ವಾಕ್ಯವನ್ನು ಸಾರುವುದರಲ್ಲಿ ಆಸಕ್ತರಾಗಿರಿ. ಪರವಶಾಭಾಷೆಗಳನ್ನು ಆಡುವವರನ್ನು ತಡೆಯಬೇಡಿ.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು