Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:32 - ಕನ್ನಡ ಸತ್ಯವೇದವು C.L. Bible (BSI)

32 ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪ್ರವಾದಿಗಳ ಜೀವಾತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿಯೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಪ್ರವಾದ್ ಕರುನ್ ಬೊಲ್ತಲ್ಯಾಂಚೆ ಪ್ರೆರನ್ ತೆಂಚ್ಯಾ ಹತೊಟಿತ್ ರ್‍ಹಾವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:32
14 ತಿಳಿವುಗಳ ಹೋಲಿಕೆ  

ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.


ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ನೀವು, ಒಬ್ಬರಾದ ಮೇಲೆ ಒಬ್ಬರು ದೇವರ ವಾಕ್ಯವನ್ನು ಬೋಧಿಸಬಹುದು. ಆಗ ಎಲ್ಲರೂ ಕಲಿತುಕೊಂಡು ಪ್ರೋತ್ಸಾಹಪಡೆಯಲು ಸಾಧ್ಯವಾಗುತ್ತದೆ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು