Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:6 - ಕನ್ನಡ ಸತ್ಯವೇದವು C.L. Bible (BSI)

6 ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ರ್‍ಹಾತಾನಾ ಭಾವಾನು ಅನಿ ಭೆನಿಯಾನು, ಮಿಯಾ ದೆವಾಕ್ನಾ ಯೆಲ್ಲಿ ದಾಕ್ವನ್ ನಾಹೊಲ್ಯಾರ್ ಉಲ್ಲೆ ಶಾನೆಪಾನ್ ನಾಹೊಲ್ಯಾರ್ ಪ್ರೆರನಾನ್ ಭರಲ್ಲಿ ಬಾತ್ಮಿ, ನಾಹೊಲ್ಯಾರ್ ಉಲ್ಲಿ ಶಿಕಾಪಾ ಹಾನ್ತಲೆ ಸೊಡುನ್, ವಿಚಿತ್ರ್ ಬಾಶಾತ್ನಿ ಬೊಲುನ್ಗೆತ್ ತುಮ್ಚೆ ಮದ್ದಿ ಯೆಲ್ಯಾರ್, ಮಾಜ್ಯಾನ್ ತುಮ್ಕಾ ಕಾಯ್ ಫಾಯ್ದೊ ಹೊಯ್ ಹೊತ್ತೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:6
32 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.


ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.


ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದವನ್ನು ಹೊಮ್ಮಿಸುತ್ತವೆ; ಅವುಗಳ ಸ್ವರಗಳಲ್ಲಿ ಯಾವ ವ್ಯತ್ಯಾಸವೂ ಕಂಡುಬರದಿದ್ದರೆ, ನುಡಿಸಿದ್ದು, ಬಾಜಿಸಿದ್ದು ಇಂತಹುದೇ ರಾಗವೆಂದು ತಿಳಿಯುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು