Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:2 - ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ಪರ್ಗಟ್ ಕರಲ್ಲ್ಯಾ ಸರ್ಕೆಚ್ ತುಮಿ ತಿ ಖಬರ್ ಸಂಬಾಳುನ್ ಘೆವ್ನ್ ಗೆಲ್ಯಾಶಿ ತರ್, ತಿಚೆ ವೈನಾ ತುಮ್ಕಾ ಸುಟ್ಕಾ ಗಾವ್ತಾ. ನಾ ಹೊಲ್ಯಾರ್ ತುಮ್ಚೊ ವಿಶ್ವಾಸ್ ಬೆಕಾರ್ ಮನುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:2
31 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ಆತ್ಮವಿಲ್ಲದ ದೇಹವು ಸತ್ತದ್ದು; ಸತ್ಕ್ರಿಯೆಗಳಿಲ್ಲದ ವಿಶ್ವಾಸವೂ ಸತ್ತದ್ದೇ ಸರಿ.


ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರಮಾಡಬಲ್ಲುದೇ?


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತವಿಶ್ವಾಸವೇ ಸರಿ.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್‍ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ


ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ?


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಹೌದು, ಉದ್ಧಾರದ ಮಾರ್ಗದಲ್ಲಿರುವವರಿಗೂ ವಿನಾಶಮಾರ್ಗದಲ್ಲಿರುವವರಿಗೂ ಕ್ರಿಸ್ತಯೇಸುವೇ ದೇವರಿಗರ್ಪಿಸಿದ ಪರಿಮಳದಂತೆ ನಾವು ಇದ್ದೇವೆ.


ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು