Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:27 - ಕನ್ನಡ ಸತ್ಯವೇದವು C.L. Bible (BSI)

27 “ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆಂಬದಾಗಿ ಹೇಳಿಯದೆಯಲ್ಲಾ. ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿ ಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್ ದೆವಾನ್ ಸಗ್ಳಿ ಜಿನ್ಸಾ ತೆಚ್ಯಾ ಪಾಯಾಂಚ್ಯಾ ಬುಡಿ ಘಾಟಲ್ಲಿ ಹಾತ್. ಮನುನ್ ಪವಿತ್ರ್ ಪುಸ್ತಕ್ ಮನ್ತಾ. ಸಗ್ಳಿ ಜಿನ್ಸಾ ಮನ್ತಾನಾ ಸಗ್ಳಿ ಜಿನ್ಸಾ ರಚುನ್ ಕ್ರಿಸ್ತಾಚ್ಯಾ ಖಾಲ್ತಿ ರ್‍ಹಾಯ್ ಸರ್ಕೆ ಕರಲ್ಲೊ ದೆವ್ ಖಾಲ್ತಿ ಹೊತಾ ಮನುನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:27
14 ತಿಳಿವುಗಳ ಹೋಲಿಕೆ  

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು