Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:29 - ಕನ್ನಡ ಸತ್ಯವೇದವು C.L. Bible (BSI)

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ತಲೆ ನಾ ಹೊಲ್ಯಾರ್, ಮರಲ್ಲ್ಯಾಂಚ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್ ಕಿ, ತೆ ಕಾಯ್ ಕಾಮಾಕ್? ಮರಲ್ಲೆ ಝಿತ್ತೆ ಹೊವ್ನ್ ಉಟಿನಾತ್ ಹೊಲ್ಯಾರ್, ಲೊಕಾ ತೆಂಚೆಸಾಟ್ನಿ ಕಸ್ಲ್ಯಾ ಫಾಯ್ದ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:29
7 ತಿಳಿವುಗಳ ಹೋಲಿಕೆ  

ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.


ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.


ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಈತನಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.


ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು