Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:14 - ಕನ್ನಡ ಸತ್ಯವೇದವು C.L. Bible (BSI)

14 ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಶೂರರಾಗಿರಿ, ಬಲಗೊಳ್ಳಿರಿ. ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರತಿಯೊಂದನ್ನು ಪ್ರೀತಿಯಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮಿ ಕರ್‍ತಲೆ ಸಗ್ಳೆ ಪ್ರೆಮಾನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:14
22 ತಿಳಿವುಗಳ ಹೋಲಿಕೆ  

ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ:


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಸ್ತೇಫನನನ್ನು ಮತ್ತು ಆತನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ಅಖಾಯದ ಪ್ರಥಮ ಕ್ರೈಸ್ತವಿಶ್ವಾಸಿಗಳು. ದೇವಜನರ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಂಡವರು. ನಾನು ನಿಮ್ಮಲ್ಲಿ ವಿನಂತಿಸುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು