Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)

14 ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆ ಕೊನಾಕ್ಡೆ ಆತ್ಮೊ ನಾ ತೆನಿ ದೆವಾಚ್ಯಾ ಆತ್ಮ್ಯಾಕ್ನಾ ಯೆತಲಿ ಆಯಾರಾ ಘೆವ್ನ್ ಹೊಯ್ನಾ. ಅಸ್ಲ್ಯಾ ಲೊಕಾನ್ಕಿ ಖರೆಬಿ ತೆ ಅರ್ಥ್ ಹೊಯ್ನಾ, ತಿ ತೆಂಕಾ ಪಿಸೆಪಾನ್ ಸರ್ಕೆ ದಿಸಾತ್, ಕಶ್ಯಾಕ್ ಮಟ್ಲ್ಯಾರ್, ತೆಚಿ ಕಿಮ್ಮತ್ ಖಾಲಿ ಆತ್ಮಿಕ್ ಆದಾರಾಚ್ಯಾ ವೈನಾ ನ್ಯಾಯ್ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:14
36 ತಿಳಿವುಗಳ ಹೋಲಿಕೆ  

ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು.


ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ.


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.


ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು