Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಿಯಾ ಪರ್‍ಚಾರ್ ಕರ್‍ತಲೆ ಹೆ ಶಾನ್‍ಪಾನ್ ದೆವಾಚೆ ಅನಿ ಗುಟಾನ್ ಥವಲ್ಲೆ, ತೆನಿ ಹ್ಯೊ ಜಗ್ ಕರುಚ್ಯಾ ಅದ್ದಿಚ್ ಅಮ್ಚ್ಯಾ ಮಹಿಮೆಸಾಟ್ನಿ ಅದ್ದಿಚ್‍ ಎಚುನ್ ಕಾಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:7
21 ತಿಳಿವುಗಳ ಹೋಲಿಕೆ  

ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು