Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಭಿಂಯ್ ಪೆರ್‍ಲೊ ಅಪೊಲ್ಲೊನ್ ಪಾನಿ ವೊತ್ಲ್ಯಾನ್, ಖರೆ ತೆ ವಾಡಿ ಸರ್ಕೆ ಕರಲ್ಲೆ ದೆವಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:6
29 ತಿಳಿವುಗಳ ಹೋಲಿಕೆ  

ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.


ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.


ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು