Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:9 - ಕನ್ನಡ ಸತ್ಯವೇದವು C.L. Bible (BSI)

9 ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ದೆವಾಸಾಟಿ ಕಾಮ್ ಕರ್‍ತಲೆ ವಾಂಗ್ಡಿ, ತುಮಿ ದೆವಾಚೆ ಸೆತ್, ತುಮಿ ದೆವಾಚೆ ಘರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:9
41 ತಿಳಿವುಗಳ ಹೋಲಿಕೆ  

ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).


ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.


ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ವಿದೇಶಿಯರು, ಮಂದೆ ಕಾವಲುಗಾರರಾಗುವರು ನಿಮಗೆ ಅನ್ಯ ಜನರು ಉಳುವವರೂ ತೋಟಗಾರರಾಗುವರೂ ನಿಮಗೆ.


ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.


ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.


ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು