Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:19 - ಕನ್ನಡ ಸತ್ಯವೇದವು C.L. Bible (BSI)

19 ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನಲ್ಲ ಅವರ ಶಕ್ತಿಯನ್ನೇ ಗೊತ್ತುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಮಿಯಾ ತುಮ್ಚ್ಯಾಕ್ಡೆ ಯೆತಾ ಅನಿ ದೆವಾಚಿ ಖುಶಿ ರ್‍ಹಾಲ್ಯಾರ್ ಲಗ್ಗುನಾಚ್ ಯೆತಾ; ತನ್ನಾ ತೊಂಡಾನ್ ಮೊಟೆ ಬೊಲ್ತಲ್ಯಾಂಚ್ಯಾ ಹಾತಾನ್ ಕಾಯ್ ಕಾಯ್ ಕರುಕ್ ಹೊತಾ ಮನುನ್ ಬಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:19
18 ತಿಳಿವುಗಳ ಹೋಲಿಕೆ  

ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ದೇವರ ಚಿತ್ತವಾದರೆ ಪ್ರೌಢ ವಿಷಯಗಳತ್ತ ಪ್ರಗತಿಪರರಾಗೋಣ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ , ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ.


ನಾನು ನನ್ನ ಪತ್ರಗಳ ಮೂಲಕ ನಿಮ್ಮನ್ನು ಬೆದರಿಸುತ್ತಿದ್ದೇನೆ ಎಂದು ಯಾರೂ ಭಾವಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು