Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:21 - ಕನ್ನಡ ಸತ್ಯವೇದವು C.L. Bible (BSI)

21 ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತರ್ ತುಮ್ಕಾ ಖಲೆ ಪಾಜೆ? ಮಿಯಾ ತುಮ್ಚ್ಯಾಕ್ಡೆ ಬೆತ್ತಾಚಿ ಖಾಟಿ ಘೆವ್ನ್ ಯೆವ್ಚೆ ಕಾಯ್? ಪ್ರೆಮಾನ್ ಅನಿ ಥಂಡ್ ಮನಾನ್ ಯೆವ್ಚೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:21
16 ತಿಳಿವುಗಳ ಹೋಲಿಕೆ  

ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೀಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.


ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು