Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:10 - ಕನ್ನಡ ಸತ್ಯವೇದವು C.L. Bible (BSI)

10 ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಚೊರಾ, ಖುದ್ಗೆ, ಫಿದೊಡೆ, ದುಸ್ರ್ಯಾಚೆ ನಾವ್ ವೈಟ್ ಕರ್ತಲೆ , ಲುಟ್ತಲೊ, ಅಸ್ಲೆ ಕೊನ್‍ಬಿ ದೆವಾಚೊ ರಾಜ್ ಜೊಡುಕ್ ಸಕಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:10
19 ತಿಳಿವುಗಳ ಹೋಲಿಕೆ  

ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು