Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:13 - ಕನ್ನಡ ಸತ್ಯವೇದವು C.L. Bible (BSI)

13 “ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಖಾನ್ ಪೊಟಾಸಾಟ್ನಿ ಅನಿ ಪೊಟ್ ಖಾನಾಸಾಟ್ನಿ” ಮನ್ತಲೆ ಖರೆ ಹಾಯ್: ಹೆ ಅನಿ ತೆ ದೊನಿಬಿ ದೆವ್ ಎಕ್ ದಿಸ್ ನಾಪತ್ತೊ ಕರ್‍ತಾ. ಆಂಗ್ ವೆಭಿಚಾರಾಸಾಟ್ನಿ ನ್ಹಯ್, ತೆ ಧನಿಯಾಸಾಟ್ನಿ ಅನಿ ಧನಿ ಆಂಗಾಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:13
20 ತಿಳಿವುಗಳ ಹೋಲಿಕೆ  

ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.


ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ, ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.)


ಮನುಷ್ಯನನ್ನು ಕಲುಷಿತಗೊಳಿಸುವಂಥವು ಇವೇ. ಕೈ ತೊಳೆಯದೆ ಊಟಮಾಡುವುದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ,” ಎಂದರು.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು