Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:19 - ಕನ್ನಡ ಸತ್ಯವೇದವು C.L. Bible (BSI)

19 ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮ್ಚಿ ಆಂಗಾ ಪವಿತ್ರ್ ಆತ್ಮ್ಯಾಚಿ ಗುಡಿಯಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತೊಚ್ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರ್‍ತಾ ಹೊಯ್ ಕಾಯ್ ನಾ? ದೆವಾನುಚ್ ತೆಕಾ ತುಮ್ಕಾ ದಿಲ್ಯಾನಾಯ್, ತುಮಿ ತುಮ್ಚಿಚ್ ಆಸ್ತಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:19
17 ತಿಳಿವುಗಳ ಹೋಲಿಕೆ  

ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು