Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:15 - ಕನ್ನಡ ಸತ್ಯವೇದವು C.L. Bible (BSI)

15 ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ವಿಶ್ವಾಸಾತ್ ನಸಲ್ಲೊ ವಾಂಗ್ಡಿ ಸೊಡುನ್ ಜಾತಾ ಮನುನ್ ಮನ್ತಾ ಜಾಲ್ಯಾರ್, ತೊ ನಾ ತರ್ ತಿ ಜಾಂವ್ದಿತ್, ಅಸ್ಲ್ಯಾ ವಿಶಯಾತ್ ಎಕ್ ಭಾವಾಕ್ ನಾ ಹೊಲ್ಯಾರ್ ಭೆನಿಕ್ ಕಸ್ಲಿಬಿ ಜಬರ್ದಸ್ತಿ ನಾ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತುಮ್ಕಾ ಸಮಾದಾನಾನ್ ಜಿವನ್ ಕರುಕ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:15
11 ತಿಳಿವುಗಳ ಹೋಲಿಕೆ  

ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರು ಅವರಿಗೆ ಅಗತ್ಯವಾದುದನ್ನು ನೀಡದೆ, “ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು,” ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು?


ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.


ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು