Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:31 - ಕನ್ನಡ ಸತ್ಯವೇದವು C.L. Bible (BSI)

31 ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಚ್ ಹ್ಯಾ ಜಗಾತ್ಲಿ ಸಾಮಾನಾ ವಾಪರ್‍ತಲ್ಯಾನಿ ತಿ ವಾಪ್ರಿನಸಲ್ಲ್ಯಾ ಸಾರ್ಕೆ ಜಿವನ್ ಕರುಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಭಾಯ್ಲೊ ರುಪ್ ನಾಪತ್ತೊ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:31
26 ತಿಳಿವುಗಳ ಹೋಲಿಕೆ  

ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ.


ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.


ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು