Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನನ್ನು ವಿಚಾರಿಸುವವರಿಗೆ ಇದೇ ನನ್ನ ಉತ್ತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಜನರು ನಮ್ಮನ್ನು ವಿಚಾರಣೆ ಮಾಡಲು ಬಯಸುತ್ತಾರೆ. ನಾನು ಅವರಿಗೆ ಕೊಡುವ ಉತ್ತರ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜಿ ಇಚಾರ್ನಿ ಕರ್ತಲ್ಯಾಕ್ನಿ ಮಾಜಿ ಜವಾಬ್ ಅಸೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:3
14 ತಿಳಿವುಗಳ ಹೋಲಿಕೆ  

ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು.


ನಿಮ್ಮಿಂದ ಅನ್ನಪಾನಗಳನ್ನು ಪಡೆಯಲು ನನಗೆ ಹಕ್ಕಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು