Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:8 - ಕನ್ನಡ ಸತ್ಯವೇದವು C.L. Bible (BSI)

8 ಇವು ಕೇವಲ ಲೋಕರೂಢಿಯ ಮಾತುಗಳಲ್ಲ. ಧರ್ಮಶಾಸ್ತ್ರವೂ ಇದನ್ನು ಅನುಮೋದಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇವುಗಳು ಕೇವಲ ಮಾನುಷ ಉದಾಹರಣೆಗಳಲ್ಲ. ದೇವರ ಧರ್ಮಶಾಸ್ತ್ರವೂ ಈ ಸಂಗತಿಗಳನ್ನು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಿಯಾ ಹೆ ಮಾನ್ಸಾಚ್ಯಾ ಚಾಲಿ ಪರ್‍ಕಾರ್ ಬೊಲುಕ್ ಲಾಗ್ಲಾ ಕಾಯ್? ಮೊಯ್ಜೆಚೊ ಖಾಯ್ದೊಬಿ ಹೆಚ್ ಸಾಂಗ್ತಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:8
9 ತಿಳಿವುಗಳ ಹೋಲಿಕೆ  

ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು