Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:20 - ಕನ್ನಡ ಸತ್ಯವೇದವು C.L. Bible (BSI)

20 ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಂಚ್ಯಾತ್ಲ್ಯಾ ಹೆಮೆನ್ಯುಸ್ ಅನಿ ಅಲೆಗ್ಸಾಂಡರ್ ಮನ್ತಲ್ಯಾಕ್ಬಿ, ತೆನಿ ದೆವಾಚಿ ನಿಂದ್ಯಾ ಕರುಚೆ ನ್ಹಯ್ ಮನುನ್ ತೆಂಕಾ ಬುದ್ದ್ ಶಿಕ್ವುಕ್ ಮನುನ್ ಸೈತಾನಾಚ್ಯಾ ಹಾತಿತ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:20
17 ತಿಳಿವುಗಳ ಹೋಲಿಕೆ  

ಅವರ ಮಾತು ರಾಜ ಹುಣ್ಣಿನಂತೆ ಹರಡಿಕೊಳ್ಳುತ್ತದೆ. ಹುಮೆನಾಯ ಮತ್ತು ಫಿಲೇತ ಇಂಥವರ ಗುಂಪಿಗೆ ಸೇರಿದ್ದಾರೆ.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಏಕೆಂದರೆ, ಈಗಾಗಲೇ ಕೆಲವು ವಿಧವೆಯರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.


ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು