Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ಲೊಚ್ ದೆವ್ ಹಾಯ್, ಅನಿ ಮಾನ್ಸಾಕ್ನಿ, ಅನಿ ದೆವಾಕ್ ಎಕ್‍ಕ್ಡೆ ಕರ್‍ತಲೊ ತೊ ಮಾನುಸ್ ಎಕ್ಲೊಚ್ ತೊಚ್ ಕ್ರಿಸ್ತ್ ಜೆಜು ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:5
28 ತಿಳಿವುಗಳ ಹೋಲಿಕೆ  

ಒಂದೇ ಪಕ್ಷ ಇರುವಾಗ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬರೇ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


“ಇಸ್ರಯೇಲ್ ಜನಾಂಗವೇ ಕೇಳು; ನಿನ್ನ ದೇವರಾದ ಸರ್ವೇಶ್ವರ ಸ್ವಾಮಿ ಒಬ್ಬರೇ ದೇವರು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.


ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು