Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೇಗನೆ ನಿನ್ನ ಬಳಿಗೆ ಬರುವೆನೆಂದು ನನಗೆ ನಿರೀಕ್ಷೆಯುಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿನ್ನ ಬಳಿಗೆ ಬಹುಬೇಗ ಬರುವೆನೆಂಬ ಭರವಸೆ ನನಗಿದೆ. ಆದರೆ ಈಗ ನಾನು ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹಿ ಚಿಟಿ ಲಿವಲ್ಲ್ಯಾ ಸರ್ಕೆ ಲಗ್ಗುನಾಚ್ ಯೆವ್ನ್ ಮಿಯಾ ತುಕಾ ಯೆವ್ನ್ ಭೆಟ್ತಾ ಕಾಯ್ಕಿ ಮನುನ್ ಬರೊಸೊ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:14
11 ತಿಳಿವುಗಳ ಹೋಲಿಕೆ  

ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.


ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.


ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು.


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ನಿಷ್ಠೆಯಿಂದ ಸೇವೆಸಲ್ಲಿಸುವ ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ: ಕ್ರಿಸ್ತಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನು ಪಡೆಯುತ್ತಾರೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು