Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:19 - ಕನ್ನಡ ಸತ್ಯವೇದವು C.L. Bible (BSI)

19 ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಎಕ್ ವಡಿಲ್ ಮಾನ್ಸಾ ವರ್‍ತಿ ಘಾಟಲ್ಲೊ ಅಪ್ವಾದ್ ದೊಗಾನಿ ನಾ ಹೊಲ್ಯಾರ್ ತಿಗಾನಿ ಸಾಂಗ್ಲ್ಯಾ ಸಿವಾಯ್ ಒಪ್ಪುನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:19
14 ತಿಳಿವುಗಳ ಹೋಲಿಕೆ  

ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.


“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.


ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


ಇಬ್ಬರ ಸಾಕ್ಷ್ಯ ಒಂದೇ ಆಗಿದ್ದರೆ ಅದು ಸತ್ಯವೆಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು