Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:22 - ಕನ್ನಡ ಸತ್ಯವೇದವು C.L. Bible (BSI)

22 ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಧನಿಯಾಚ್ಯಾ ಕಾಮಾಸಾಟ್ನಿ ಮನುನ್ ಲೊಕಾಕ್ನಿ ತೆಂಚ್ಯಾ ಟಕ್ಲ್ಯಾ ವರ್‍ತಿ ಹಾತ್ ಥವ್ನ್ ಎಚುನ್ ಕಾಡ್ತಲ್ಯಾತ್ ಗಡ್ಬಡಿ ಕರುನಕೊ. ದುಸ್ರ್ಯಾಂಚ್ಯಾ ಪಾಪಾತ್ ತಿಯಾ ಭಾಗ್ ಘೆವ್‍ನಕೊ; ತುಕಾಚ್ ತಿಯಾ ಪವಿತ್ರ್ ರ್‍ಹಾಯ್ ಸರ್ಕೆ ಸಂಬಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:22
18 ತಿಳಿವುಗಳ ಹೋಲಿಕೆ  

ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಇವರನ್ನು ಮೊದಲು ಪರೀಕ್ಷೆಗೊಳಪಡಿಸಬೇಕು. ಯಾವುದೇ ಕುಂದುಕೊರತೆ ಕಂಡುಬರದಿದ್ದಲ್ಲಿ, ಇವರನ್ನು ಸಭಾಸೇವಕರನ್ನಾಗಿ ನೇಮಿಸಬಹುದು.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.


ಏಕೆಂದರೆ, ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.


ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.


ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು