Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:6 - ಕನ್ನಡ ಸತ್ಯವೇದವು C.L. Bible (BSI)

6 ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಎಕ್ ಘೊವ್ ಮರಲ್ಲಿ ಬಾಯ್ಕೊಮನುಸ್ ತಿಜಿ ಅಂಗಾಚಿ ಆಶಾ ಪುರಾ ಕರುಕ್ ತಿಚೆ ಆಂಗ್ ತಿನಿ ವಾಪ್ರುನ್ ಘೆಟ್ಲ್ಯಾರ್, ತಿ ಝಿತ್ತಿ ರ್‍ಹಾಲ್ಯಾರ್‍ಬಿ ಮರಲ್ಲ್ಯಾ ಸರ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:6
29 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!


ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.


ಸುಂದರವೂ, ಸೊಂಪಾದ ಹಸಿರುಗಾವಲಿಗೆ ಸಮಾನವೂ ಆದ ಸಿಯೋನ್ ನಗರ ನಾಶವಾಗಲಿದೆ.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು.


ಅವನಿಗೆ ನನ್ನ ಹೆಸರಿನಲ್ಲಿ, ‘ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ!


ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಆ ಭೀಕರ ಇಕ್ಕಟ್ಟಿಗೆ ಸಿಕ್ಕಿಸಿದ ಕಾಲದಲ್ಲಿ ಅಂಗಾಲನ್ನೂ ನೆಲಕ್ಕೆ ಇಡದಷ್ಟು ಕೋಮಲ ಹಾಗು ಸುಕುಮಾರಿಯಾದ ಸ್ತ್ರೀ ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ಗುಟ್ಟಾಗಿ ತಿನ್ನಲಾಶಿಸುವಳು; ಪ್ರಾಣಪ್ರಿಯರಾದ ಗಂಡನಿಗು, ಮಗನಿಗು, ಮಗಳಿಗು ಕೊಡಲಿಚ್ಛಿಸದೆ ಮೋರೆಯನ್ನು ಸಿಂಡರಿಸಿಕೊಳ್ಳುವಳು.


ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ಇವರಲ್ಲಿ ಕೆಲವರು ಮನೆಮನೆಗಳಿಗೆ ನುಸಳಿ ನಾನಾ ಪಾಪಗಳಿಂದಲೂ ಕಾಮನೆಗಳಿಂದಲೂ ಕೂಡಿರುವ ಮತಿಗೆಟ್ಟ ಮಹಿಳೆಯರನ್ನು ವಶಪಡಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು