Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:1 - ಕನ್ನಡ ಸತ್ಯವೇದವು C.L. Bible (BSI)

1 ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ಮಾನಕ್ಕೂ ಯೋಗ್ಯರೆಂದೆಣಿಸಲಿ; ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದೆ ಉಂಟಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆ ಕೊನ್ ಆಳಾ ಹೊವ್ನ್ ಹಾತ್, ತೆನಿ ಅಪ್ನಾಚ್ಯಾ ಸಾವ್ಕಾರಾಕ್ ಸಗ್ಳ್ಯಾ ರಿತಿನ್ ಮಾನ್ ದಿಂವ್ದಿತ್, ಅಶೆ, ದೆವಾಚ್ಯಾ ಅನಿ ಅಮ್ಚ್ಯಾ ಶಿಕಾಪಾಚ್ಯಾ ವಿಶಯಾತ್ ಕೊನ್‍ಬಿ ವಾಯ್ಟ್ ಬೊಲಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:1
35 ತಿಳಿವುಗಳ ಹೋಲಿಕೆ  

ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ!


ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.


ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,


ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು