Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:13 - ಕನ್ನಡ ಸತ್ಯವೇದವು C.L. Bible (BSI)

13 ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾಚ್ಯಾ ಇದ್ರಾಕ್ ತೊ ಸಗ್ಳ್ಯಾಕಿ ಜಿವ್ ದಿತಾ ಅನಿ ಕ್ರಿಸ್ತ್ ಜೆಜುನ್ ಪೊಂತ್ ಪಿಲಾತಾಕ್ ಬರಿ ಸಾಕ್ಷಿ ದಿಲ್ಯಾನ್. ಮಿಯಾ ತುಕಾ ಹುಕುಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:13
22 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು.


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು