Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:3 - ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕೊನ್ ಝುಟ್ಯಾ ಸಂಗ್ತಿಯಾ ಶಿಕ್ವುತಾತ್ ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ಖರ್‍ಯಾ ಗೊಸ್ಟಿಯಾ ಅನಿ ಅಮ್ಚಿ ಖರಿ ದೆವಸ್ಪಾನಾಚಿ ಶಿಕಾಪಾ ಮಾನುನ್ ಘೈಯ್ನಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:3
19 ತಿಳಿವುಗಳ ಹೋಲಿಕೆ  

ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.


ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ;


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು