Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:4 - ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಗರುಕಿನ್ ಫುಗ್ಲಾ ಅನಿ ತೆಕಾ ಕಾಯ್ಬಿ ಕಳಿನಾ. ತೊ ಪಾಯ್ದ್ಯಾಕ್ ಪಡಿನಸಲ್ಯಾ ಆಶ್ಯಾನಿ ಖರ್‍ಯಾ ಗೊಸ್ಟಿಯಾಂಚ್ಯಾ ವಿಶಯಾತ್ ವಾದಿಕ್‍ ವಾದ್ ಕರ್‍ತಾ ಅನಿ ಗೊಸ್ಟಿಯಾಂಚೊ ಝಗ್ಡೊ ಕರ್‍ತಾ. ಹೆಚ್ಯಾ ವೈನಾ ಖುದ್ಗೆಪಾನ್, ಎಕಾಮೆಕಾತ್ನಿ ಪಡುನ್‍ ಯೆಯ್‍ನಸಲ್ಲೆ, ನಿಂದಾ ಅನಿ ಬುರ್ಶಿ ಗಾಳಿಯಾ ದಿತಲೆ ಯೆತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:4
44 ತಿಳಿವುಗಳ ಹೋಲಿಕೆ  

ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.


ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.


ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.


ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ


ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.


“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.


ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು