Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:9 - ಕನ್ನಡ ಸತ್ಯವೇದವು C.L. Bible (BSI)

9 ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿ ಸಗ್ಳಿ ಲೊಕಾ, ಅಮಿ ತುಮ್ಚೆಕ್ಡೆ ಯೆಲ್ಲ್ಯಾ ತನ್ನಾ ತುಮಿ ಕಶೆ ಅಮ್ಕಾ ಸ್ವಿಕಾರ್ ಕರ್ಲ್ಯಾಸಿ, ಅನಿ ಮುರ್ತಿಚ್ಯಾ ಪುಜ್ಯಾತ್ನಾ ಖರ್‍ಯಾ ಝಿತ್ತ್ಯಾ ದೆವಾಚಿ ಸೆವಾ ಕರುಕ್ ದೆವಾಕ್ಡೆ ಕಶೆ ಪರತ್ಲ್ಯಾಶಿ ಮನುನ್ ಅಪ್ನಿಚ್ ಸಾಂಗುಕ್ ಲಾಗಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:9
30 ತಿಳಿವುಗಳ ಹೋಲಿಕೆ  

ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು