Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ಧಿಹೇಳುತ್ತಾ ಧೈರ್ಯಪಡಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಂದೆಯು ತನ್ನ ಸ್ವಂತ ಮಕ್ಕಳೊಡನೆ ನಡೆದುಕೊಳ್ಳುವಂತೆ ನಿಮ್ಮಲ್ಲಿ ಪ್ರತಿಯೊಬ್ಬರೊಡನೆಯೂ ನಡೆದುಕೊಂಡೆವೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಕ್ ಬಾಬಾ ಅಪ್ನಾಚ್ಯಾ ಪೊರಾಕ್ನಿ ಕಸೊ ಚಾಲ್ವುತಾ ತಸೆಚ್ ಅಮಿಬಿ ತುಮ್ಚ್ಯಾ ವಾಂಗ್ಡಾ ಚಲ್ಲಾಂವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:11
40 ತಿಳಿವುಗಳ ಹೋಲಿಕೆ  

ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.


ವಿಧವೆಯರು ಯಾವ ದೋಷಾರೋಪಣೆಗೂ ಗುರಿಯಾಗದಂತೆ, ಅವರಿಗೆ ಈ ಆಜ್ಞೆಗಳನ್ನು ಕೊಡು.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ; ನನ್ನ ಮಾತುಗಳನ್ನು ಆಲಿಸಿರಿ.


ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.


ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನಿಗಾಗಿ ಕೈಮೇಲೆ ಕೈಯಿಟ್ಟು ಪ್ರಮಾಣಮಾಡಿದ್ದರೆ,


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.


ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.


ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.


ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು