Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮ್ಕಾ ಹರಿಎಕ್ಲ್ಯಾಕ್ನಿ ಅಮಿ ಉಮ್ಮೆದ್ ದಿಲಾಂವ್, ಅನಿ ಸಮಾದಾನ್ ಸಾಂಗ್ಲಾಂವ್ ಅನಿ ಅಪ್ನಾಚ್ಯಾ ರಾಜಾತ್ ಅನಿ ಮಹಿಮೆತ್ ಭಾಗ್ ಘೆವ್ಕ್ ಮನುನ್ ಬಲ್ವಲ್ಲ್ಯಾ ದೆವಾಕ್ ಪಸಂದ್ ಯೆಯ್ ಸಾರ್ಕೆ; ತುಮ್ಚಿ ಜಿವನಾ ಚಾಲ್ವುನ್ ಘೆವ್ನ್ ಜಾವ್ಚೆ ಮನುನ್ ಅಮಿ ತುಮ್ಚೆಕ್ಡೆ ಮಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:12
29 ತಿಳಿವುಗಳ ಹೋಲಿಕೆ  

ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.


ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು