Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ನಮ್ಮ ಬೋಧನೆಯು ಅಬದ್ಧವಲ್ಲ, ಅಶುದ್ಧವಲ್ಲ, ಮೋಸವಲ್ಲ; ದೇವರು ನಮ್ಮನ್ನು ಯೋಗ್ಯರೆಂದೆಣಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಬೋಧನೆಯು ತಪ್ಪೂ ಅಲ್ಲ ಮತ್ತು ಅಶುದ್ಧವಾದ ಉದ್ದೇಶವನ್ನು ಹೊಂದಿಯೂ ಇಲ್ಲ ಮತ್ತು ನಿಮ್ಮನ್ನು ಮೋಸಗೊಳಿಸುವ ಪ್ರಯತ್ನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ತುಮ್ಕಾ ಶಿಕ್ವಲ್ಲಿ ಬರಿ ಖಬರ್ ಚುಕಿಚಿ ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಚಿ ನ್ಹಯ್, ನಾಹೊಲ್ಯಾರ್ ಕೊನಾಕ್ ಮೊಸ್ ಕರುಚೆ ಮನ್ತಲೆಬಿ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:3
18 ತಿಳಿವುಗಳ ಹೋಲಿಕೆ  

ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು