Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:13 - ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಸೆ, ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ನಾಚ್ಯಾ ಸಗ್ಳ್ಯಾ ಭಕ್ತಾಂಚ್ಯಾ ವಾಂಗ್ಡಾ ದಿಸ್ತಾನಾ, ದೆವಾ ಅಮ್ಚ್ಯಾ ಬಾಬಾಚ್ಯಾ ಇದ್ರಾಕ್ ತುಮಿ ಪವಿತ್ರ್ ಅನಿ ಪರಿಪುರ್ನ್ ಹೊವ್ನ್ ಇಬೆ ರ್‍ಹಾವ್ಕ್ ತೊಚ್ ತುಮ್ಚಿ ಮನಾ ವಿಶ್ವಾಸಾತ್ ಘಟ್ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:13
28 ತಿಳಿವುಗಳ ಹೋಲಿಕೆ  

ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.


ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು