Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:2 - ಕನ್ನಡ ಸತ್ಯವೇದವು C.L. Bible (BSI)

2 ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕ್ರಿಸ್ತಾಚಿ ಬರಿ ಖಬರ್ ಸಾಂಗ್ತಲ್ಯಾ ದೆವಾಚ್ಯಾ ಕಾಮಾತ್ ಅಮ್ಚೊ ವಾಂಗ್ಡಿ ಹೊವ್ನ್ ಅಸಲ್ಲ್ಯಾ ಅಮ್ಚ್ಯಾ ಭಾವಾಕ್ ತಿಮೊತಿಕ್, ತುಮ್ಕಾ ಘಟ್ ಕರುಕ್ ಅನಿ ವಿಶ್ವಾಸಾತ್ ಉಮ್ಮೆದಿನ್ ಭರಿ ಸಾರ್ಕೆ ಕರುಕ್ ಮನುನ್ ಅಮಿ ಧಾಡುನ್ ದಿಲ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:2
24 ತಿಳಿವುಗಳ ಹೋಲಿಕೆ  

ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.


ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಆತನ ಜೊತೆಯಲ್ಲಿ ನಂಬಿಕಸ್ಥನಾದ ಪ್ರಿಯ ಸಹೋದರ ಒನೇಸಿಮನನ್ನು ಕಳುಹಿಸುತ್ತಿದ್ದೇನೆ. ಇವನು ನಿಮ್ಮ ಊರಿನ ಸಭೆಗೆ ಸೇರಿದವನು. ಇಲ್ಲಿ ನಡೆಯುವುದನ್ನೆಲ್ಲಾ ಇವರು ನಿಮಗೆ ತಿಳಿಸುವರು.


ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು