Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:15 - ಕನ್ನಡ ಸತ್ಯವೇದವು C.L. Bible (BSI)

15 ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕೊನ್‍ಬಿ ವಾಯ್ಟಾಚ್ಯಾ ಬದ್ಲಾಕ್ ವಾಯ್ಟುಚ್ ಅನಿ ಎಕ್ಲ್ಯಾಕ್ ಕರಿನಸಿ ಸರ್ಕೆ ಬಗುನ್ ಘೆವಾ, ಅನಿ ಕನ್ನಾಬಿ ಸಗ್ಳ್ಯಾ ಎಳಾರ್ ಎಕಾಮೆಕಾತ್ನಿ ಅನಿ ಸಗ್ಳ್ಯಾ ಲೊಕಾಕ್ನಿ ಬರೆ ಕರುಸಾಟ್ನಿ ಖಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:15
39 ತಿಳಿವುಗಳ ಹೋಲಿಕೆ  

ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು.


“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆ, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆ” ಎನ್ನಬೇಡ.


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ; ಎಡವಿದರೆ ಮನೋಲ್ಲಾಸ ಪಡಬೇಡ.


“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.


ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು