Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:9 - ಕನ್ನಡ ಸತ್ಯವೇದವು C.L. Bible (BSI)

9 ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಅಮ್ಕಾ ಅಪ್ನಾಚ್ಯಾ ರಾಗಾತ್ ನಾಸ್ ಹೊವ್‍ಸಾಟ್ನಿ ಮನುನ್ ರಚುಕ್ ನಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಸುಟ್ಕಾ ಗಾವುಚಿ ಮನುನ್ ತೆನಿ ರಚ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:9
23 ತಿಳಿವುಗಳ ಹೋಲಿಕೆ  

ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.


‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.


ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು