1 ಪೂರ್ವಕಾಲ ವೃತ್ತಾಂತ 10:14 - ಕನ್ನಡ ಸತ್ಯವೇದವು C.L. Bible (BSI)14 ಆದುದರಿಂದ ಸರ್ವೇಶ್ವರ ಅವನನ್ನು ಕೊಲ್ಲಿಸಿ ಜೆಸ್ಸೆಯ ಮಗ ದಾವೀದನಿಗೆ ರಾಜ್ಯವನ್ನೊಪ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಅವನನ್ನು ಕೊಲ್ಲಿಸಿ ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.