Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:7 - ಕನ್ನಡ ಸತ್ಯವೇದವು C.L. Bible (BSI)

7 ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರು ತಮ್ಮ ಸೈನ್ಯವು ವೈರಿಗಳಿಂದ ಓಡಿಸಲ್ಪಡುವದನ್ನು ನೋಡಿದರು. ಅರಸನಾದ ಸೌಲನು ಮತ್ತು ಅವನ ಗಂಡುಮಕ್ಕಳು ಸತ್ತುಹೋಗಿರುವುದು ಅವರಿಗೆ ತಿಳಿಯಿತು. ಆಗ ಅವರೂ ತಮ್ಮತಮ್ಮ ಮನೆಗಳನ್ನು ಬಿಟ್ಟು ಓಡಿದರು. ಫಿಲಿಷ್ಟಿಯರು ಅವರ ಮನೆಗಳಿಗೆ ಬಂದಾಗ ಯಾರೂ ಇಲ್ಲದ್ದನ್ನು ನೋಡಿ ಅಲ್ಲಿಯೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:7
9 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ನಿಮ್ಮ ಮಧ್ಯೆಯಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆ ಆಗುತ್ತಾ ಹೀನಸ್ಥಿತಿಗೆ ಇಳಿಯುವಿರಿ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಹೀಗೆ ಸೌಲನೂ ಅವನ ಮೂರು ಮಂದಿ ಗಂಡುಮಕ್ಕಳೂ ಅದೇ ದಿವಸ ಮೃತರಾದರು. ಸೌಲನ ಮನೆಯವರಲ್ಲಿ ರಾಜ್ಯ ಆಳಲು ಯಾರೂ ಉಳಿಯಲಿಲ್ಲ.


ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು