Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:14
9 ತಿಳಿವುಗಳ ಹೋಲಿಕೆ  

ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.


ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II


ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.


ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.


ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು.


ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡುಬಿಟ್ಟದ್ದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು