Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:16 - ಕನ್ನಡ ಸತ್ಯವೇದವು C.L. Bible (BSI)

16 ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೇತ್ಲೆಹೇವಿುನಲ್ಲಿ ಒಂದು ಕಾವಲುದಂಡನ್ನು ಇಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇನ್ನೊಂದು ಸಮಯದಲ್ಲಿ ದಾವೀದನು ಕೋಟೆಯೊಳಗಿದ್ದನು. ಫಿಲಿಷ್ಟಿಯರ ಸೈನ್ಯ ಬೆತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:16
10 ತಿಳಿವುಗಳ ಹೋಲಿಕೆ  

ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಮೊರೆಯಿಡುವೆನು ನಾನು ಪ್ರಭುವಿಗೆ I ಸ್ವರವೆತ್ತಿ ಬೇಡುವೆನು ಆತನಿಗೆ II


ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ಸಮಾಚಾರ ದಾವೀದನಿಗೆ ಸಿಕ್ಕಿತು. ಅವನು ಮಾವೋನಿನಲ್ಲಿ ಇರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ್ ಮರುಭೂಮಿಗೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.


ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು.


ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.


ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು