Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:22 - ಕನ್ನಡ ಸತ್ಯವೇದವು C.L. Bible (BSI)

22 ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲಿನವನಾದ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬೆನಾಯನು ಯೆಹೋಯಾದನ ಮಗ. ಇವನು ಕಬ್ಜಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:22
15 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್,


ದಾವೀದನು ಮರುಭೂಮಿಯ ಕೋಟೆಯಲ್ಲಿದ್ದಾಗ ಅವನ ಪಡೆಗಳಲ್ಲಿ ಬಂದು ಸೇರಿದ ಗಾದ್ ಗೋತ್ರದ ಪ್ರಸಿದ್ಧರೂ ಅನುಭವಶಾಲಿಗಳೂ ಆದ ಯುದ್ಧವೀರರ ಹೆಸರುಗಳು: ಇವರು ನೋಡಲು ಸಿಂಹಗಳಂತೆ ಭೀಕರರೂ ಪರ್ವತದ ಜಿಂಕೆಗಳಂತೆ ಚುರುಕಾದವರೂ ಗುರಾಣಿ, ಈಟಿಗಳನ್ನು ಉಪಯೋಗಿಸುವುದರಲ್ಲಿ ನಿಪುಣರೂ ಆಗಿದ್ದರು.


ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಅವನು ಈ ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾದುದಲ್ಲದೇ ಅದರ ನಾಯಕನೂ ಆದನು. ಆದರೆ ‘ಮೂವರು ಪ್ರಮುಖ ವೀರರು’ ಎಂಬ ಪಡೆಯವರಷ್ಟು ಪ್ರಸಿದ್ಧನಾಗಲಿಲ್ಲ.


ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು