Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:4 - ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ಇಸ್ರಾಯೇಲ್ಯರೆಲ್ಲರನ್ನೂ ಕರಕೊಂಡು ಯೆಬೂಸೆನಿಸಿಕೊಂಡಿದ್ದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು. ಆ ಪ್ರಾಂತದ ಮೂಲನಿವಾಸಿಗಳು ಯೆಬೂಸಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:4
10 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ದಾವೀದನು ಪಟ್ಟಣದೊಳಗೆ ಪ್ರವೇಶಿಸಲು ಎಂದಿಗೂ ಸಾಧ್ಯವಿಲ್ಲವೆಂದು ಯೆಬೂಸಿಯರು ಹೇಳಿದ್ದರು. ಆದರೂ ದಾವೀದನು ಪಟ್ಟಣವನ್ನು ಪ್ರವೇಶಿಸಿ ಸಿಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಅದು ‘ದಾವೀದ್ ನಗರ’ ಎಂದು ಹೆಸರು ಪಡೆಯಿತು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.


ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು