Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:2 - ಕನ್ನಡ ಸತ್ಯವೇದವು C.L. Bible (BSI)

2 ‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:2
17 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಎಲ್ಲ ಇಸ್ರಯೇಲರಿಗೆ ಉಪದೇಶಿಸತಕ್ಕವರೂ ಸರ್ವೇಶ್ವರನಿಗೆ ಪ್ರತಿಷ್ಠರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಯೇಲ್ ಅರಸನೂ ಆದ ಸೊಲೊಮೋನನು ಕಟ್ಟಿಸಿದ ಮಹಾದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿ; ಅದನ್ನು ಹೆಗಲ ಮೇಲೆ ಹೊತ್ತುಕೊಳ್ಳುವುದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಸರ್ವೇಶ್ವರನಿಗೂ ಅವರ ಪ್ರಜೆಗಳಾದ ಇಸ್ರಯೇಲರಿಗೂ ಸೇವೆಸಲ್ಲಿಸಿರಿ.


ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.


ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.


“ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.


ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು