Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ನಿಬಂಧನ ಮಂಜೂಷವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದಾವೀದನೂ ಇಸ್ರೇಲಿನ ಹಿರಿಯರೂ ಮುಖಂಡರೂ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ಹೋದರು. ಅವರು ಅದನ್ನು ಓಬೇದೆದೋಮನ ಮನೆಯಿಂದ ಹೊರತಂದರು. ಎಲ್ಲರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:25
21 ತಿಳಿವುಗಳ ಹೋಲಿಕೆ  

ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.


ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.


ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು