Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನ ಮಂಜೂಷದ ಮುಂದೆ ದೇವರ ಆರಾಧನೆ ಮಾಡುವುದಕ್ಕಾಗಿ ದಾವೀದನು ಕೆಲವು ಮಂದಿ ಲೇವಿಯರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಮಂಜೂಷದ ಮುಂದೆ ದೇವಾರಾಧನೆ ನಡಿಸುವದಕ್ಕೋಸ್ಕರ ದಾವೀದನು ಕೆಲವು ಮಂದಿ ಲೇವಿಯರನ್ನು ನೇವಿುಸಿದನು. ಇಸ್ರಾಯೇಲ್‍ದೇವರಾದ ಯೆಹೋವನನ್ನು ಸ್ತುತಿಸುವದೂ ಹಾಡಿ ಹರಸುವದೂ ಅವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:4
25 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ಕರುಣೆಯಿಂದೆನ್ನನು ದೇವಾ, ರಕ್ಷಿಸು I ತ್ವರೆಯಾಗಿ ಬಂದು ಪ್ರಭು, ಉದ್ಧರಿಸು II


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು.


ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.


ಇಸ್ರಯೇಲಿನ ಪ್ರತಿ ಒಬ್ಬ ಪುರುಷನಿಗೂ ಸ್ತ್ರೀಗೂ ಒಂದೊಂದು ರೊಟ್ಟಿಯನ್ನೂ ಬೇಯಿಸಿದ ಒಂದು ತುಂಡುಮಾಂಸವನ್ನೂ ಒಣಗಿದ ದ್ರಾಕ್ಷೆಗಳನ್ನೂ ಹಂಚಿದನು


ಅವರಲ್ಲಿ ಆಸಾಫನು ಮುಖ್ಯಸ್ಥನಾಗಿಯೂ ಜೆಕರ್ಯ ಅವನ ಸಹಾಯಕನಾಗಿಯೂ ನೇಮಕಗೊಂಡರು. ಯೇಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಹಾಗು ಯೆಗೀಯೇಲ್ ಸ್ವರಮಂಡಲಗಳನ್ನು ಬಾರಿಸಲು ನೇಮಕವಾದರು. ಆಸಾಫನು ತಾಳಗಳನ್ನು ಬಾರಿಸಬೇಕಾಗಿತ್ತು.


ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು